ಪುಸ್ತಕ ಬಿಡುಗಡೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಪುಸ್ತಕ ಬಿಡುಗಡೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ಆಗಸ್ಟ್ 03, 2009

ಸ೦ತಸದ ಘಳಿಗೆ - ಕರೆಯೋಲೆ


ಯಾವತ್ತಾರೂ ಹೀಗಾಗತ್ತೆ ಅಂದ್ಕಂಡಿರ್ಲಿಲ್ಲ, ಹಾಂಗಾಗೇ ಬರೀಬೇಕು ಅಂತ ಗೊತಾಗ್ತಿಲ್ಲ. ಹಾಳೆಯಲ್ಲಿ ಬರಿಯೋದಾಗಿದ್ರೆ ಹಳೇ ಸಿನಿಮಾಗಳಲ್ಲಿ ನೋಡಿದ ಹಾಗೆ ಸುಮಾರು ೪೦-೫೦ ಬಿಳೀ ಕಾಗದದ ಉಂಡೆಗಳು ಇಲ್ಲಿ ನನ್ನ ಸುತ್ತ ಬಿದ್ದಿರ್ತಿದ್ವು , ಗ್ಯಾರೆಂಟಿ. ಪುಣ್ಯ,ಬ್ಲಾಗರಿನ ಬಿಳಿಯ ಅವಕಾಶ- ಅದಕ್ಕೆಲ್ಲ ಅವಕಾಶ ಕೊಡಲಿಲ್ಲ.

ನನ್ನ ಕವವ ಸಂಕಲನ, ಹೂವು ಹೆಕ್ಕುವ ಸಮಯ ಅಗಸ್ಟ್ ೯ರ ಶ್ರಾವಣ ಭಾನುವಾರ ಬಿಡುಗಡೆಯಾಗ್ತಿದೆ. ಜೋಗಿ ಸರ್ ಮುನ್ನುಡಿ ಬರೆದ ಪುಸ್ತಕವನ್ನು ನಾನು ಬೆರಗುಗಣ್ಣುಗಳಿಂದ ಆರಾಧಿಸುವ ಹಿರಿಯ ಕವಿ ಎಚ್.ಎಸ್.ವೆಂಕಟೇಶಮೂರ್ತಿಯವರು ಲೋಕಾರ್ಪಣೆ ಮಾಡುತ್ತಿದ್ದಾರೆ.

ಜೊತೆಗೆ ಅಂದೇ, ಗೆಳೆಯ ಸುಶ್ರುತನ ಹೊಳೆಬಾಗಿಲು ಲಲಿತ ಪ್ರಬಂಧ ಸಂಕಲನ ಬಿಡುಗಡೆಯಾಗ್ತಿದೆ. ಅದನ್ನ ಬಿಡುಗಡೆ ಮಾಡೋರು ನಾಗತಿಹಳ್ಳಿ ಚಂದ್ರಶೇಖರ್ ಸರ್.

ನಮ್ಮದೇ ಸಂಸ್ಥೆ ಪ್ರಣತಿ ಇಬ್ಬರ ಪುಸ್ತಕಗಳನ್ನೂ ಪ್ರಕಟಿಸಿದೆ. ಈ ವರ್ಷದ ಕನ್ನಡ ಪುಸ್ತಕ ಪ್ರಾಧಿಕಾರದ ಯುವ ಬರಹಗಾರರಿಗೆ ಪ್ರೋತ್ಸಾಹ ನೀಡೋ ಪುಸ್ತಕ ಪ್ರಕಟಣೆ ಯೋಜನೆಯಲ್ಲಿ ನಮ್ಮ ಪುಸ್ತಕಗಳು ಆಯ್ಕೆಯಾದ್ದವು.

ನಾನು, ಸುಶ್ ಮತ್ತು ಪ್ರಣತಿಯ ಗೆಳೆಯರೆಲ್ಲ ಬನಶಂಕರಿಯ ಸುಚಿತ್ರ ಫಿಲ್ಮ್ ಸೊಸೈಟಿ ಯಲ್ಲಿ ಬರುವ ಭಾನುವಾರ, 9ನೇ ತಾರೀಖು ಬೆಳಗ್ಗೆ 10.30ಕ್ಕೆ ನಿಮಗಾಗಿ ಕಾಯುತ್ತಿರುತ್ತೇವೆ.

ಬಂದು ನಮ್ಮನ್ನು ಖುಷಿಗೊಳಿಸುತ್ತೀರಿ ನೀವು. ಗೊತ್ತು ನಮಗೆ:)